Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:22
15 ತಿಳಿವುಗಳ ಹೋಲಿಕೆ  

ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:


ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಸರ್ವೇಶ್ವರನಾದ ದೇವರು ಆದಾಮನಿಗೂ ಆತನ ಹೆಂಡತಿಗೂ ಚರ್ಮದ ಅಂಗಿಗಳನ್ನು ತೊಡಿಸಿದರು.


ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು