Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:15 - ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೆಂದು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದಿರುವೆಯಾ?” ಎಂದು ಬದಲಿತ್ತಳು. ಆಗ ರಾಖೇಲಳು, “ಸರಿ, ನೀನು ನಿನ್ನ ಮಗನು ತಂದ ಕಾಮೋದ್ದೀಪಕ ಹಣ್ಣುಗಳನ್ನು ನನಗೆ ಕೊಟ್ಟೆಯಾದರೆ ಇಂದಿನ ರಾತ್ರಿ ಅವರು ನಿನ್ನೊಡನೆ ಮಲಗಬಹುದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಲೇಯಳು - ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಫಲಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ ಎಂದು ಹೇಳಲು ರಾಹೇಲಳು - ಒಳ್ಳೇದು, ನೀನು ನಿನ್ನ ಮಗನ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:15
7 ತಿಳಿವುಗಳ ಹೋಲಿಕೆ  

ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”


ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.


“ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


ಗೋದಿಯ ಸುಗ್ಗಿ ಕಾಲದಲ್ಲಿ ರೂಬೇನನು ಹೊಲದ ಕಡೆ ಹೊಗುತ್ತಿದ್ದಾಗ ಕಾಮೋದ್ದೀಪಕ ಹಣ್ಣುಗಳನ್ನು ಕಂಡನು. ಅವನ್ನು ತಂದು ತನ್ನ ತಾಯಿ ಲೇಯಳಿಗೆ ಕೊಟ್ಟನು. ರಾಖೇಲಳು ಆಕೆಗೆ, “ನಿನ್ನ ಮಗ ತಂದಿರುವ ಕಾಮೋದ್ದೀಪಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಕ್ಕಾ,” ಎಂದು ಕೇಳಿಕೊಂಡಳು.


ಸಂಜೆ ಯಕೋಬನು ಹೊರಗಡೆಯಿಂದ ಬಂದಾಗ ಲೇಯಳು ಅವನೆದುರಿಗೆ ಹೋಗಿ, “ನೀವು ನನ್ನೊಡನೆ ಕೂಡಬೇಕು. ನಾನು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನು ಕೊಟ್ಟು ನಿಮ್ಮನ್ನು ಕೊಂಡುಕೊಂಡಿದ್ದೇನೆ,” ಎಂದಳು. ಅಂದಿನ ರಾತ್ರಿ ಯಕೋಬನು ಆಕೆಯೊಡನೆ ಕೂಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು