Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:32 - ಕನ್ನಡ ಸತ್ಯವೇದವು C.L. Bible (BSI)

32 ಅದೇನೆಂದರೆ, ಈ ದಿನ ನಾನು ನಿಮ್ಮ ಮಂದೆಗಳಿಗೆ ಹೋಗಿ ವಿಕಾರ ಬಣ್ಣವುಳ್ಳವುಗಳನ್ನೆಲ್ಲ ಅಂದರೆ, ಕುರಿಮರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಮರಿಗಳಲ್ಲಿ ಚುಕ್ಕೆ ಅಥವಾ ಮಚ್ಚೆವುಳ್ಳವುಗಳನ್ನೂ ವಿಂಗಡಿಸುತ್ತೇನೆ. ಅವೇ ನನ್ನ ಸಂಬಳ ಎಂದು ನೀವು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದೇನಂದರೆ, ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ ವಿಕಾರವರ್ಣವುಳ್ಳವುಗಳನ್ನೆಲ್ಲಾ ಅಂದರೆ ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಗಳಲ್ಲಿ ಚುಕ್ಕೆ ಅಥವಾ ಮಚ್ಚೆ ಉಳ್ಳವುಗಳನ್ನೂ ವಿಂಗಡಿಸುವೆನು; [ಮುಂದೆ ಅಂಥಾದ್ದು ಹುಟ್ಟಿದರೆ] ಅದೇ ನನ್ನ ಸಂಬಳವೆಂದು ನೀನು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:32
5 ತಿಳಿವುಗಳ ಹೋಲಿಕೆ  

‘ಚುಕ್ಕೆಯುಳ್ಳವುಗಳನ್ನು ಮಾತ್ರ ನಿನ್ನ ಸಂಬಳಕ್ಕೆ ತೆಗೆದುಕೊ’, ಎಂದು ನಿಮ್ಮ ತಂದೆ ಹೇಳುವಾಗ ಹಿಂಡಿನ ಆಡುಕುರಿಗಳೆಲ್ಲ ಚುಕ್ಕೆಯುಳ್ಳ ಮರಿಗಳನ್ನೇ ಈದುವು. ‘ರೇಖೆಗಳಿರುವುವುಗಳನ್ನು ಮಾತ್ರ ಸಂಬಳಕ್ಕೆ ತೆಗೆದುಕೊ’, ಎಂದು ಹೇಳಿದಾಗ ಆಡುಕುರಿಗಳೆಲ್ಲವು ರೇಖೆಯುಳ್ಳ ಮರಿಗಳನ್ನೇ ಈದುವು.


“ಆಡುಕುರಿಗಳು ಸಂಗಮ ಮಾಡುವ ಕಾಲದಲ್ಲಿ ನಾನೊಂದು ಕನಸನ್ನು ಕಂಡೆ. ಅದರಲ್ಲಿ ಕಣ್ಣೆತ್ತಿ ನೋಡುತ್ತಿದ್ದ ನನಗೆ ಮೇಕೆಗಳ ಮೇಲೆ ಹಾರಿದ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿಯೆ ಕಾಣಿಸಿದವು.


ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು.


ಆಗ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು?” ಎಂದನು. ಯಕೋಬನು, “ನನಗೇನೂ ಕೊಡಬೇಕಾಗಿಲ್ಲ; ಒಂದೇ ಒಂದು ಕಾರ್ಯಕ್ಕೆ ಒಪ್ಪಿಗೆ ನೀಡಿದರೆ, ನಾನು ಮತ್ತೆ ನಿಮ್ಮ ಮಂದೆಯನ್ನು ಮೇಯಿಸಿಕೊಂಡು ಬರುತ್ತೇನೆ;


ಇನ್ನು ಮೇಲೆ ನೀವು ಬಂದು ನನ್ನವುಗಳನ್ನು ಪರೀಕ್ಷಿಸುವಾಗ ನಾನು ಪ್ರಮಾಣಿಕನೋ ಇಲ್ಲವೋ ಎಂಬುದು ಪ್ರತ್ಯಕ್ಷವಾಗುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆ ಇಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನವುಗಳಲ್ಲಿ ಸಿಕ್ಕಿದರೆ, ಅದನ್ನು ಕದ್ದು ತಂದದ್ದೆಂದು ಎಣಿಸಬಹುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು