Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:13 - ಕನ್ನಡ ಸತ್ಯವೇದವು C.L. Bible (BSI)

13 ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:13
7 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಅದಕ್ಕೆ ರಾಖೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ಇನ್ನು ನಮಗೆ ಪಾಲಾಗಲಿ, ಹಕ್ಕುಬಾಧ್ಯತೆಯಾಗಲಿ ಏನಿದೆ?


ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು