Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:19 - ಕನ್ನಡ ಸತ್ಯವೇದವು C.L. Bible (BSI)

19 ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:19
19 ತಿಳಿವುಗಳ ಹೋಲಿಕೆ  

ಅನಂತರ ಆಕೆ ಗೊಂಬೆಯೊಂದನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಮಾಡಿದ ತಲೆದಿಂಬನ್ನು ಇಟ್ಟು ಕಂಬಳಿಯನ್ನು ಹೊದಿಸಿದಳು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.


ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ.


ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.


ಶಿಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಯಕೋಬನೂ ಆರಾಮ್ಯನಾದ ಆ ಲಾಬಾನನಿಗೆ ತಾನು ಹೋಗುತ್ತಾ ಇದ್ದೇನೆಂದು ತಿಳಿಸದೆ ವಂಚಿಸಿ ಓಡಿಹೋದನು.


ರಾಖೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿಮ್ಮ ಮುಂದೆ ಎದ್ದು ನಿಂತುಕೊಳ್ಳಲಾಗದೆ ಇದ್ದೇನೆ, ಕೋಪಿಸಿಕೊಳ್ಳಬೇಡಿ, ನಾನು ಮುಟ್ಟಾಗಿದ್ದೇನೆ,” ಎಂದು ಹೇಳಿದಳು. ಎಂದೇ ಲಾಬಾನನು ಎಷ್ಟು ಹುಡುಕಿ ನೋಡಿದರೂ ಆ ವಿಗ್ರಹಗಳನ್ನು ಕಂಡುಹಿಡಿಯಲಾಗಲಿಲ್ಲ.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ನನ್ನ ತಂದೆಯ ಮನೆಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಹೆಣ್ಣನ್ನು ತರಬೇಕು’ ಎಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ.


ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೊರಟಿದ್ದಾರೆಂಬ ಸಮಾಚಾರ ತಾಮಾರಳಿಗೆ ಮುಟ್ಟಿತು.


ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.


ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಯಿಮನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವ ವ್ಯವಸ್ಥೆಮಾಡಿದನು. ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಆಮಂತ್ರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು