Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:23 - ಕನ್ನಡ ಸತ್ಯವೇದವು C.L. Bible (BSI)

23 ಅವನು ಕೂಡಲೆ ತನ್ನ ಬಂಧುಬಳಗದವರನ್ನು ಕರೆದುಕೊಂಡು, ಏಳು ದಿನ ಪ್ರಯಾಣಮಾಡಿ ಯಕೋಬನನ್ನು ಹಿಂದಟ್ಟಿ ಗಿಲ್ಯಾದ್ ಗುಡ್ಡಗಾಡಿನಲ್ಲಿ ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ತನ್ನ ಬಂಧು ಜನರನ್ನು ಕೂಡಿಕೊಂಡು, ಏಳುದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ, ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:23
6 ತಿಳಿವುಗಳ ಹೋಲಿಕೆ  

ಮಾರನೆಯ ದಿನ ಕೂಡ ಮೋಶೆ ಹೊರಗೆ ಹೋಗಿ ನೋಡಿದನು. ಈ ಸಾರಿ ಇಬ್ಬರು ಹಿಬ್ರಿಯರೇ ಜಗಳವಾಡುತ್ತಿದ್ದರು. ತಪ್ಪಿತಸ್ಥನಿಗೆ, “ಏನಯ್ಯಾ ಸ್ವಕುಲದವನನ್ನೇ ಹೊಡೆಯುತ್ತಿರುವೆ ಏಕೆ?” ಎಂದು ಕೇಳಿದನು.


ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


ಯಕೋಬನು ಓಡಿಹೋದ ಸುದ್ದಿ ಲಾಬಾನನಿಗೆ ಮೂರನೆಯ ದಿನ ತಿಳಿಯಿತು.


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು