Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ಯೆಹೋವನು ಅವನಿಗೆ - ನಿನ್ನ ತಂದೆತಾತಂದಿರ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು; ನಾನು ನಿನ್ನೊಂದಿಗೆ ಇರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:3
26 ತಿಳಿವುಗಳ ಹೋಲಿಕೆ  

ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.


ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.


ಮೆಸಪೊಟೇಮಿಯಾದಲ್ಲಿ ತಾನು ಗಳಿಸಿಕೊಂಡಿದ್ದ ಆಸ್ತಿಯನ್ನೆಲ್ಲ ತೆಗೆದುಕೊಂಡು, ಜಾನುವಾರುಗಳನ್ನೆಲ್ಲ ಅಟ್ಟಿಕೊಂಡು ಕಾನಾನ್ ನಾಡಿಗೆ, ತನ್ನ ತಂದೆ ಇಸಾಕನ ಬಳಿಗೆ ಹೊರಟನು.


ರಾಖೇಲಳು ಜೋಸೆಫನನ್ನು ಹೆತ್ತ ಬಳಿಕ ಯಕೋಬನು ಲಾಬಾನನಿಗೆ, “ನನಗೆ ಅಪ್ಪಣೆಯಾಗಬೇಕು, ನಾನು ಸ್ವಂತ ಊರಿಗೂ ನಾಡಿಗೂ ಹಿಂದಿರುಗಬೇಕಾಗಿದೆ.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.


ಆದುದರಿಂದ ಯಕೋಬನು ರಾಖೇಲಳನ್ನು ಮತ್ತು ಲೇಯಳನ್ನು ತಾನು ಆಡುಕುರಿ ಮೇಯಿಸುತ್ತಿದ್ದ ಅಡವಿಗೆ ಕರೆಸಿದನು.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು