Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:31 - ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಪ್ರತ್ಯುತ್ತರವಾಗಿ ಯಕೋಬನು, “ನೀವು ನಿಮ್ಮ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಕಿತ್ತುಕೊಳ್ಳುವಿರಿ ಎಂದು ಭಯಪಟ್ಟು ಹೀಗೆ ಹೊರಟು ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದಕ್ಕೆ ಯಾಕೋಬನು - ನೀನು ನಿನ್ನ ಹೆಣ್ಣುಮಕ್ಕಳನ್ನು ಬಲಾತ್ಕಾರದಿಂದ ತೆಗೆದುಕೊಳ್ಳುವಿ ಎಂದು ಭಯಪಟ್ಟು [ಹೀಗೆ ಹೊರಟು ಬಂದೆನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಕೋಬನು, “ನಾನು ನಿನಗೆ ಹೇಳದೆ ಹೊರಟು ಬಂದೆ. ಯಾಕೆಂದರೆ ನನಗೆ ಭಯವಾಗಿತ್ತು; ನೀನು ನಿನ್ನ ಹೆಣ್ಣುಮಕ್ಕಳನ್ನು ನನ್ನಿಂದ ತೆಗೆದುಕೊಳ್ಳಬಹುದೆಂದು ನಾನು ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದಕ್ಕೆ ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನಿನ್ನ ಪುತ್ರಿಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವೆ ಎಂದು ಭಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:31
5 ತಿಳಿವುಗಳ ಹೋಲಿಕೆ  

ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.


ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು