Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:37 - ಕನ್ನಡ ಸತ್ಯವೇದವು C.L. Bible (BSI)

37 ನಾನು ಮಾಡಿದ ದ್ರೋಹವಾದರೂ ಏನು? ನೀವು ನನ್ನ ಸಾಮಾನುಗಳನ್ನೆಲ್ಲಾ ಪರೀಕ್ಷಿಸಿ ನೋಡಿದ್ದಾಯಿತು; ನಿಮ್ಮ ಸೊತ್ತೇನಾದರೂ ಸಿಕ್ಕಿದೆಯೇ? ಸಿಕ್ಕಿದ್ದರೆ ನನ್ನವರ ಮುಂದೆಯೂ ನಿಮ್ಮವರ ಮುಂದೆಯೂ ತಂದಿಡಿ, ನೋಡೋಣ. ಅವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನನ್ನ ಸಾಮಾನನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನವರ ಮುಂದೆಯೂ ನಿನ್ನವರ ಮುಂದೆಯೂ ಅದನ್ನು ತಂದಿಡು ನೋಡೋಣ; ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗೆಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:37
11 ತಿಳಿವುಗಳ ಹೋಲಿಕೆ  

ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.


ಆಳುಗಳು ಅವುಗಳನ್ನು ಗುಡಾರದಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಯೇಲರೂ ಇದ್ದಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಮುಂದಿಟ್ಟರು.


ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.


ಆಗ ಯಕೋಬನಿಗೆ ಸಿಟ್ಟು ಬಂದಿತು, ಅವನು ಲಾಬಾನನೊಡನೆ ಹೀಗೆಂದು ವಾಗ್ವಾದ ಮಾಡಿದನು - “ನೀವು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರಲು ನಾನು ಮಾಡಿದ ತಪ್ಪೇನು?


ಇದಕ್ಕಾಗಿಯೇ ನಾನು ಇಪ್ಪತ್ತು ವರ್ಷ ನಿಮ್ಮ ಬಳಿ ಇದ್ದುದು? ನಿಮ್ಮ ಆಡುಕುರಿಗಳು ಕಂದು ಹಾಕಲಿಲ್ಲ; ನಿಮ್ಮ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು