ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.
ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ.