Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:13 - ಕನ್ನಡ ಸತ್ಯವೇದವು C.L. Bible (BSI)

13-15 ಯಕೋಬನು ಆ ರಾತ್ರಿಯನ್ನು ಅಲ್ಲೇ ಕಳೆದನು. ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ, ಇಪ್ಪತ್ತು ಟಗರು, ಹಾಲು ಕರೆಯುವ ಮೂವತ್ತು ಒಂಟೆ ಮತ್ತು ಅವುಗಳ ಮರಿ, ನಲವತ್ತು ಆಕಳು, ಹತ್ತು ಹೋರಿ, ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತನ್ನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13-14 ಅವನು ಆ ರಾತ್ರಿ ಅಲ್ಲೇ ಇಳುಕೊಂಡು ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:13
18 ತಿಳಿವುಗಳ ಹೋಲಿಕೆ  

ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.


ಗುಟ್ಟಾಗಿ ಬಹುಮಾನ ಕೊಟ್ಟು ಸಿಟ್ಟನ್ನು ಅಡಗಿಸುತ್ತಾರೆ; ಮಡಿಲಲ್ಲಿ ಲಂಚವನ್ನು ಮುಚ್ಚಿಟ್ಟು ಕೋಪವನ್ನು ಆರಿಸುತ್ತಾರೆ.


ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.


ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!


ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.


ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,


ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು