Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:28 - ಕನ್ನಡ ಸತ್ಯವೇದವು C.L. Bible (BSI)

28 ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:28
24 ತಿಳಿವುಗಳ ಹೋಲಿಕೆ  

“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಅವನಿಗೆ ದೇವರು, “ನಿನ್ನ ಹೆಸರು; ಯಕೋಬ ಅಲ್ಲವೇ? ಇನ್ನು ಮೇಲೆ ನೀನು ಯಕೋಬನೆನಿಸಿಕೊಳ್ಳದೆ 'ಇಸ್ರಯೇಲ್' ಎನಿಸಿಕೊಳ್ಳಬೇಕು” ಎಂದು ಹೇಳಿದರು. ಹೀಗೆ ಅವನ ಹೆಸರು ಇಸ್ರಯೇಲ್ ಆಯಿತು.


ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.


ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.


ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).


ಅದಕ್ಕೆ ಯಕೋಬ, ‘ನಿನ್ನದಾಗಿರುವ ಜ್ಯೇಷ್ಠಪುತ್ರನ ಹಕ್ಕನ್ನು ನನಗೆ ಮೊದಲು ಮಾರಿಬಿಡು,’ ಎಂದು ಹೇಳಿದ.


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ಆಗ ಸೌಲನು ದಾವೀದನಿಗೆ, “ಪುತ್ರನೇ, ದಾವೀದನೇ, ದೇವರು ನಿನ್ನನ್ನು ಹರಸಲಿ! ನೀನು ಮಹಾಕಾರ್ಯಗಳನ್ನು ಸಾಧಿಸಿ ಯಶಸ್ವಿಯಾಗು,” ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.


ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಆ ಪುರುಷ, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಯಕೋಬನು, “ನನ್ನ ಹೆಸರು ಯಕೋಬ” ಎಂದನು.


ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು