Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:29 - ಕನ್ನಡ ಸತ್ಯವೇದವು C.L. Bible (BSI)

29 ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:29
18 ತಿಳಿವುಗಳ ಹೋಲಿಕೆ  

ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದಾಗ ದೇವರು ಮತ್ತೆ ಅವನಿಗೆ ದರ್ಶನಕೊಟ್ಟು ಅವನನ್ನು ಆಶೀರ್ವದಿಸಿದರು.


ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.


ಅವನಿಗೆ ದೇವರು, “ನಿನ್ನ ಹೆಸರು; ಯಕೋಬ ಅಲ್ಲವೇ? ಇನ್ನು ಮೇಲೆ ನೀನು ಯಕೋಬನೆನಿಸಿಕೊಳ್ಳದೆ 'ಇಸ್ರಯೇಲ್' ಎನಿಸಿಕೊಳ್ಳಬೇಕು” ಎಂದು ಹೇಳಿದರು. ಹೀಗೆ ಅವನ ಹೆಸರು ಇಸ್ರಯೇಲ್ ಆಯಿತು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು