Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:3 - ಕನ್ನಡ ಸತ್ಯವೇದವು C.L. Bible (BSI)

3 ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಳಿಕ ಯಾಕೋಬನು ಎದೋಮ್ಯರ ದೇಶವಾಗಿರುವ ಸೇಯೀರ್‍ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:3
23 ತಿಳಿವುಗಳ ಹೋಲಿಕೆ  

ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು


ಇದಲ್ಲದೆ ಎದೋಮ್ ಗುಡ್ಡ ಪ್ರಾಂತ್ಯದಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ, ಮರಳುಗಾಡಿಗೆ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.


ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಆದರೆ ಹೇಗೆ ಸರ್ವೇಶ್ವರ ಸೇಯೀರಿನಲ್ಲಿರುವ ಏಸಾವ್ಯರ ಪರವಾಗಿ ಹೋರಿಯರನ್ನು ಹೊರದೂಡಿದಾಗ ಏಸಾವ್ಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,


ಏಸಾವನು ಆ ದಿನವೇ ಎದೋಮ್ ನಾಡಿಗೆ ಹೊರಟುಹೋದನು.


ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.


(ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)


‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಮನಸ್ಸೆ ಕುಲದ ಅರ್ಧಕುಲಗಳಿಗೆ ಮೋಶೆ ಕೊಟ್ಟನು, ಯಾಯಿರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರಲ್ಲೆ ಇವೆ.


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಸರ್ವೇಶ್ವರಸ್ವಾಮಿ ವಾಗ್ದಾನ ಮಾಡಿದಂತೆ ಸೌಲನಿಗೆ ಬದಲಾಗಿ ದಾವೀದನನ್ನು ಅರಸನನ್ನಾಗಿ ಮಾಡಲು, ಅನೇಕ ಸಿದ್ಧಸೈನಿಕರು ಹೆಬ್ರೋನಿಗೆ ಬಂದು ದಾವೀದನ ಸೈನ್ಯದಲ್ಲಿ ಸೇರಿದರು. ಅವರ ಸಂಖ್ಯೆಗಳು ಈ ಕೆಳಕಂಡಂತಿವೆ:


ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು