Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:5 - ಕನ್ನಡ ಸತ್ಯವೇದವು C.L. Bible (BSI)

5 ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:5
13 ತಿಳಿವುಗಳ ಹೋಲಿಕೆ  

ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.


ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.


ದಾನ ನೀಡಿರೆಂದು ನಿಮ್ಮನು ಬಿನ್ನವಿಸಿದೆನೋ? ನಿಮ್ಮಾಸ್ತಿಯಿಂದ ಲಂಚವನು ಕೋರಿದೆನೋ?


ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.


“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ದೇವರು ನಮ್ಮ ತಂದೆಯಿಂದ ಕಿತ್ತುಕೊಂಡ ಈ ಆಸ್ತಿಯೆಲ್ಲ ನಮ್ಮದಾಗಿದೆ, ನಮ್ಮ ಮಕ್ಕಳದಾಗಿದೆ. ಆದುದರಿಂದ ದೇವರು ನಿಮಗೆ ಹೇಳದಂತೆಯೇ ಮಾಡಿ,” ಎಂದು ಉತ್ತರಕೊಟ್ಟರು.


ಈ ಪ್ರಕಾರ ಯಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ಹಿಂಡುಗಳು ಮಾತ್ರವಲ್ಲ ದಾಸದಾಸಿಯರೂ ಒಂಟೆ ಕತ್ತೆಗಳೂ ಹೇರಳವಾಗಿದ್ದವು.


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು