Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:6 - ಕನ್ನಡ ಸತ್ಯವೇದವು C.L. Bible (BSI)

6 ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:6
14 ತಿಳಿವುಗಳ ಹೋಲಿಕೆ  

ಯಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಜನರ ಸಮೇತ ಬರುತ್ತಿದ್ದನು. ಕೂಡಲೆ ಅವನು ಲೇಯಳಿಗೂ ರಾಖೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿದನು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಏಸಾವನು ಒಂದು ಪರಿವಾರದ ಮೇಲೆ ಬಿದ್ದರೆ ಇನ್ನೊಂದು ತಪ್ಪಿಸಿಕೊಳ್ಳಬಹುದೆಂಬುದು ಅವನ ಯೋಚನೆಯಾಗಿತ್ತು.


ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.


ಮೆಸಪೊಟೇಮಿಯಾದಲ್ಲಿ ತಾನು ಗಳಿಸಿಕೊಂಡಿದ್ದ ಆಸ್ತಿಯನ್ನೆಲ್ಲ ತೆಗೆದುಕೊಂಡು, ಜಾನುವಾರುಗಳನ್ನೆಲ್ಲ ಅಟ್ಟಿಕೊಂಡು ಕಾನಾನ್ ನಾಡಿಗೆ, ತನ್ನ ತಂದೆ ಇಸಾಕನ ಬಳಿಗೆ ಹೊರಟನು.


ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.


ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.


ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ , “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ.


ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.


“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು