Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:18 - ಕನ್ನಡ ಸತ್ಯವೇದವು C.L. Bible (BSI)

18 ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್‍ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:18
16 ತಿಳಿವುಗಳ ಹೋಲಿಕೆ  

ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.


‘ಯೆರುಬ್ಬಾಳ’ನ ಮಗ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ,


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


ಇವರೆಲ್ಲರು ಲೇಯಳ ಸಂತತಿಯವರು. ಆಕೆ ಯಕೋಬನಿಗೆ ಇವರನ್ನಲ್ಲದೆ ದೀನಳೆಂಬ ಮಗಳನ್ನೂ ಮೆಸಪೊಟೇಮಿಯಾದಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಒಟ್ಟು ಮೂವತ್ತು ಮಂದಿ.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದಾಗ ದೇವರು ಮತ್ತೆ ಅವನಿಗೆ ದರ್ಶನಕೊಟ್ಟು ಅವನನ್ನು ಆಶೀರ್ವದಿಸಿದರು.


ಮೆಸಪೊಟೇಮಿಯಾ ನಾಡಿನಲ್ಲಿರುವ ನಿನ್ನ ತಾತ ಬೆತೂವೇಲನ ಮನೆಗೆ ಹೊರಟುಹೋಗು. ಅಲ್ಲಿ ನಿನ್ನ ಸೋದರಮಾವನಾದ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊ,” ಎಂದು ಅಪ್ಪಣೆ ಮಾಡಿದನು.


ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.


ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು


ಏಕೆಂದರೆ ನಿಮ್ಮ ತಾಯಿ ರಾಖೇಲಳು, ನಾನು ಮೆಸಪೊಟೇಮಿಯಾದಿಂದ ಬರುವಾಗ, ಕಾನಾನ್ ನಾಡಿನಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನು ಸ್ವಲ್ಪ ದೂರ ಇದ್ದಾಗಲೆ ದಾರಿಯಲ್ಲಿ ಸತ್ತು ನನ್ನನ್ನು ಅಗಲಿಹೋದಳು. ಈಗ ಬೇತ್ಲೆಹೇಮ್ ಎನಿಸಿಕೊಳ್ಳುವ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಆಕೆಯನ್ನು ಸಮಾಧಿಮಾಡಿದೆ,” ಎಂದು ಹೇಳಿದನು.


ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ಲಾಬಾನನು, ಯಕೋಬನನ್ನು ಎದುರುಗೊಂಡಾಗ ಯಕೋಬನು ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿಕೊಂಡಿದ್ದನು. ಲಾಬಾನನು ಕೂಡ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರ ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು