Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:4
18 ತಿಳಿವುಗಳ ಹೋಲಿಕೆ  

ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.


ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.


ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.


ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೆಯಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ಅರಸನು ಅವನಿಗೆ ಮುದ್ದಿಟ್ಟನು.


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು