Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:5 - ಕನ್ನಡ ಸತ್ಯವೇದವು C.L. Bible (BSI)

5 ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:5
9 ತಿಳಿವುಗಳ ಹೋಲಿಕೆ  

ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


ಅದಕ್ಕೆ ಜೋಸೆಫನು, “ಈ ದೇಶದಲ್ಲಿ ದೇವರು ನನಗೆ ಅನುಗ್ರಹಿಸಿದ ಮಕ್ಕಳು,” ಎಂದನು. ಆಗ ತಂದೆ ಯಕೋಬನು, “ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರೆದುಕೊಂಡು ಬಾ,” ಎಂದನು.


“ದೇವರಲ್ಲಿ ಭರವಸೆಯಿಡುವೆನು ನಾನು,” ಎಂದೂ “ಇಗೋ, ಇರುವೆವು ನಾನು ಮತ್ತು ದೇವರೆನಗಿತ್ತ ಕುವರರು,” ಎಂದು ಹೇಳಿದ್ದಾರೆ.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.


ಬೋವಜನು ರೂತಳನ್ನು ಮದುವೆಯಾಗಿ ಮನೆಗೆ ಕರೆದುಕೊಂಡು ಹೋದನು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ಆಕೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಊರಿನ ಮಹಿಳೆಯರು ನವೊಮಿಗೆ:


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು