Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:12 - ಕನ್ನಡ ಸತ್ಯವೇದವು C.L. Bible (BSI)

12 ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:12
13 ತಿಳಿವುಗಳ ಹೋಲಿಕೆ  

ಶಿಷ್ಯರು ಪ್ರತ್ಯುತ್ತರವಾಗಿ, “ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,” ಎಂದರು.


ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.


ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.


ಯಕೋಬನಿಗೆ ರಾಖೇಲಳ ಮೇಲೆ ಪ್ರೀತಿ. ಎಂತಲೇ, “ನಿಮ್ಮ ಕಿರಿಯ ಮಗಳು ರಾಖೇಲಳಿಗೋಸ್ಕರ ನಿಮ್ಮಲ್ಲಿ ಏಳು ವರುಷ ಸೇವೆಮಾಡುತ್ತೇನೆ,” ಎಂದು ಹೇಳಿದನು.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ಅಂತೆಯೇ ನಾನು ಹದಿನೈದು ಬೆಳ್ಳಿ ನಾಣ್ಯಗಳು ಮತ್ತು 150 ಕಿಲೋಗ್ರಾಂ. ಜವೆಗೋದಿಯನ್ನು ಕೊಟ್ಟು, ಅಂಥವಳನ್ನು ನನಗಾಗಿ ಕೊಂಡುಕೊಂಡೆನು.


ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ , “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ.


ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;


ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡು ಕೊಡಬೇಕಾದ ಅವಶ್ಯಕತೆ ಇಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು