Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:27 - ಕನ್ನಡ ಸತ್ಯವೇದವು C.L. Bible (BSI)

27 ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ಹತವಾದನಂತರ ಯಾಕೋಬನ ಮಕ್ಕಳು ಬಂದು - ಇವರು ನಮ್ಮ ತಂಗಿಯನ್ನು ಅವಮಾನಪಡಿಸಿದರಲ್ಲಾ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:27
13 ತಿಳಿವುಗಳ ಹೋಲಿಕೆ  

ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.


ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.


ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.


ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?" ಎಂದು ಪ್ರಶ್ನಿಸಿದರು.


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ಹಮೋರ್ ಮತ್ತು ಅವನ ಮಗ ಶೆಕೆಮನನ್ನು ಕೊಂದು ದೀನಳನ್ನು ಅವನ ಮನೆಯಿಂದ ಕರೆದುಕೊಂಡು ಹೊರಟುಹೋದರು.


ಊರ ಒಳಗೂ ಹೊರಗೂ ಇದ್ದ ಕುರಿ, ದನ, ಕತ್ತೆಗಳನ್ನು ಕಿತ್ತುಕೊಂಡರು.


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು