Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:3 - ಕನ್ನಡ ಸತ್ಯವೇದವು C.L. Bible (BSI)

3 ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು; ಆ ಹುಡುಗಿಯನ್ನು ಮೋಹಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:3
11 ತಿಳಿವುಗಳ ಹೋಲಿಕೆ  

ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.


ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.


ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಅವರು ಇದನ್ನು ಕೇಳಿ ಇನ್ನೂ ಹೆಚ್ಚಾಗಿ ಅತ್ತರು. ಅನಂತರ ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ.


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ತನ್ನ ತಂದೆ ಹಮೋರನನ್ನು, “ಆ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು,” ಎಂದು ಕೇಳಿಕೊಂಡನು.


ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ಮತ್ತೆ ಮನೆಗೆ ಕರೆದು ತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆ ಅವನನ್ನು ತನ್ನ ತೌರುಮನೆಯಲ್ಲಿ ಸೇರಿಸಿಕೊಂಡಳು. ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.


ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು