Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:30 - ಕನ್ನಡ ಸತ್ಯವೇದವು C.L. Bible (BSI)

30 ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:30
33 ತಿಳಿವುಗಳ ಹೋಲಿಕೆ  

ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕೆ ಅಲೆಯುತ್ತಿರಲು II


ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.


ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕ್ಕೆ ಅಲೆಯುತ್ತಿರಲು II


“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.


ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಮನೆಯವರನ್ನೆ ಬಾಧಿಸುವವನು ಗಳಿಸುವುದು ಗಾಳಿ; ಬಿದ್ದಿರುವನವನು ಜ್ಞಾನಿಗೆ ಊಳಿಗನಾಗಿ.


ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.


ಆತನ ದಾಸ ಇಸ್ರಯೇಲನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.


ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.


“ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.


ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪದಲ್ಲಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪದಲ್ಲಾಗಲಿ,


ಅವರಲ್ಲದೆ ಈಜಿಪ್ಟ್ ದೇಶದಲ್ಲಿ ಜೋಸೆಫನಿಗೆ ಹುಟ್ಟಿದವರು ಇಬ್ಬರು. ಈಜಿಪ್ಟ್ ದೇಶಕ್ಕೆ ಹೋದ ಯಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.


ಈಜಿಪ್ಟಿನವರು ನಿನ್ನನ್ನು ನೋಡಿ, ನೀನು ನನ್ನ ಹೆಂಡತಿಯಾಗಿರಬಹುದೆಂದು ಊಹಿಸಿ, ನನ್ನನ್ನು ಕೊಂದು ನಿನ್ನನ್ನು ಜೀವದಿಂದ ಉಳಿಸಾರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ಮಡದಿ ಮಕ್ಕಳನ್ನೆಲ್ಲ ಸೆರೆಹಿಡಿದರು, ಅವರ ಮನೆಗಳಲ್ಲಿ ಇದ್ದುದನ್ನೆಲ್ಲ ದೋಚಿಕೊಂಡರು.


ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?" ಎಂದು ಪ್ರಶ್ನಿಸಿದರು.


ಯಕೋಬನ ಸೊಸೆಯರಲ್ಲದೆ ಯಕೋಬನಿಂದಲೇ ಹುಟ್ಟಿ ಅವನೊಂದಿಗೆ ಈಜಿಪ್ಟ್ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.


ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಯೇಲರಿಗೆ ಮಹಾಬಾಧಕನಾದ ಹದದನ ಜೊತೆಗೆ ಇವನೂ ವೈರಿಯಾಗಿದ್ದನು. ಇವನು ಸಿರಿಯಾ ದೇಶದಲ್ಲಿ ಅರಸನಾಗಿ ಇಸ್ರಯೇಲರನ್ನು ಬಹಳವಾಗಿ ದ್ವೇಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು