Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:19 - ಕನ್ನಡ ಸತ್ಯವೇದವು C.L. Bible (BSI)

19 ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಗೆ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:19
22 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಏಕೆಂದರೆ ನಿಮ್ಮ ತಾಯಿ ರಾಖೇಲಳು, ನಾನು ಮೆಸಪೊಟೇಮಿಯಾದಿಂದ ಬರುವಾಗ, ಕಾನಾನ್ ನಾಡಿನಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನು ಸ್ವಲ್ಪ ದೂರ ಇದ್ದಾಗಲೆ ದಾರಿಯಲ್ಲಿ ಸತ್ತು ನನ್ನನ್ನು ಅಗಲಿಹೋದಳು. ಈಗ ಬೇತ್ಲೆಹೇಮ್ ಎನಿಸಿಕೊಳ್ಳುವ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಆಕೆಯನ್ನು ಸಮಾಧಿಮಾಡಿದೆ,” ಎಂದು ಹೇಳಿದನು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ನಗರಗಳೂ ಅವುಗಳಿಗೆ ಸೇರಿದ ಗ್ರಾಮಗಳು -


ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.


ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ಮಂಜೂಷವನು ಕುರಿತು ಕೇಳಿದೆವು ಎಫ್ರಾತಾದಲಿ I ನಮಗದು ಕಾಣಬಂದಿತು ಆ ಯಹಾರ್ ಮೈದಾನದಲಿ II


ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,


ಈ ದಿನ ನೀನು ನನ್ನನ್ನು ಬಿಟ್ಟುಹೋದನಂತರ, ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಖೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ವ್ಯಕ್ತಿಗಳನ್ನು ಕಾಣುವೆ; ಅವರು, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆ ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂದು ನಿನಗಾಗಿ ಹಂಬಲಿಸುತ್ತಾ ಇರುತ್ತಾರೆ’ ಎಂದು ಹೇಳುವರು.


ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,


ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.


ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು,” ಎಂದನು


ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು