Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:3 - ಕನ್ನಡ ಸತ್ಯವೇದವು C.L. Bible (BSI)

3 ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:3
24 ತಿಳಿವುಗಳ ಹೋಲಿಕೆ  

ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.


ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು