Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:30 - ಕನ್ನಡ ಸತ್ಯವೇದವು C.L. Bible (BSI)

30 ದೀಶೋನ್, ಏಚೆರ್ ಮತ್ತು ದೀಶಾನ್. ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ನಾಡಿನಲ್ಲಿ ಅಧಿಪತ್ಯ ನಡೆಸಿದ ಕುಲನಾಯಕರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅನಾಹಕುಲಪತಿ, ದೀಶೋನ್‍ಕುಲಪತಿ, ಏಚೆರ್‍ಕುಲಪತಿ, ದೀಶಾನ್‍ಕುಲಪತಿ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಆಧಿಪತ್ಯನಡಿಸಿದ ಕುಲಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:30
8 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.


ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು.


ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:


ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಇದಲ್ಲದೆ ಎದೋಮ್ ಗುಡ್ಡ ಪ್ರಾಂತ್ಯದಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ, ಮರಳುಗಾಡಿಗೆ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.


ದೀಶೋನ್, ಏಚೆರ್, ದೀಶಾನ್, ಎಂದು ಅವರನ್ನು ಹೆಸರಿಸಲಾಗಿತ್ತು. ಅವರು ಎದೋಮ್ಯರ ನಾಡಿನಲ್ಲಿ ಸೇಯೀರನ ಸಂತತಿಯವರಾದ ಹೋರಿಯರಲ್ಲಿ ಹುಟ್ಟಿದ ಕುಲನಾಯಕರು.


ಹೋರಿಯರಿಂದ ಹುಟ್ಟಿದ ಕುಲನಾಯಕರು ಇವರು - ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,


ಇಸ್ರಯೇಲರ ಅರಸರು ಆಳುವುದಕ್ಕೆ ಮುಂಚೆ ಎದೋಮ್ಯರ ನಾಡಲ್ಲಿ ಆಳುತ್ತಿದ್ದ ಅರಸರ ಹೆಸರುಗಳು ಹೀಗಿವೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು