Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:34 - ಕನ್ನಡ ಸತ್ಯವೇದವು C.L. Bible (BSI)

34 ಯೋಬಾಬನು ಸತ್ತ ಮೇಲೆ ತೇಮಾನೀಯರ ನಾಡಿನವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:34
8 ತಿಳಿವುಗಳ ಹೋಲಿಕೆ  

ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಏಸಾವನ ವಂಶದ ಕುಲನಾಯಕರು: ಏಸಾವನ ಜೇಷ್ಠಪುತ್ರನಾದ ಎಲೀಫಜನಿಂದ ತೇಮಾನ, ಏಮಾರ, ಚೆಫೋ, ಕೆನೆಜ್,


ಎಲೀಫಜನಿಗೆ ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್, ಎಂಬ ಐದು ಮಕ್ಕಳು.


ಬೆಲಗನು ಸತ್ತ ಮೇಲೆ ಬೊಚ್ರದವನಾದ ಚೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು.


ಹುಷಾಮನು ಸತ್ತ ಮೇಲೆ ಮೊವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.


ಯೋಬಾಬ ಮೃತನಾದ ಮೇಲೆ ತೇಮಾನೀಯರ ನಾಡಿನ ಹುಷಾಮ ಅರಸನಾದ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು