Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:7 - ಕನ್ನಡ ಸತ್ಯವೇದವು C.L. Bible (BSI)

7 ಸಿರಿಸಂಪತ್ತು ಹೆಚ್ಚಾಗಿ ಇದ್ದುದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿ ವಾಸಮಾಡಲು ಅನುಕೂಲವಾಗಿರಲಿಲ್ಲ; ಪಶುಪ್ರಾಣಿಗಳು ಬಹಳ ಆಗಿದ್ದುದರಿಂದ ಅವರು ತಂಗಿದ್ದ ನಾಡು ಅವರಿಗೆ ಸಾಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರ ಸಂಪತ್ತು ಹೆಚ್ಚಿದ್ದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವದಕ್ಕೆ ಅನುಕೂಲವಿರಲಿಲ್ಲ; ಅವರ ಪಶುಗಳು ಬಹಳವಾಗಿದ್ದದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:7
8 ತಿಳಿವುಗಳ ಹೋಲಿಕೆ  

ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು