Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:29 - ಕನ್ನಡ ಸತ್ಯವೇದವು C.L. Bible (BSI)

29 ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ರೂಬೇನನು ತಿರಿಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನಿಲ್ಲದ್ದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:29
14 ತಿಳಿವುಗಳ ಹೋಲಿಕೆ  

ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಅಲ್ಲದೆ ನಾಡನ್ನು ಸಂಚರಿಸಿ ನೋಡಿ ಬಂದವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನೇ ಹರಿದುಕೊಂಡು,


ಆಗ ಅವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಿದರು; ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು.


ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು:


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.


ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.


ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;


ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು, ನಿಲುವಂಗಿಯನ್ನು ಹರಿದುಕೊಂಡು, ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು