Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:33 - ಕನ್ನಡ ಸತ್ಯವೇದವು C.L. Bible (BSI)

33 ಯಕೋಬನು ಅದರ ಗುರುತನ್ನು ಹಿಡಿದು, ” ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅದರ ಗುರುತನ್ನು ಹಿಡಿದು - ಈ ಅಂಗಿ ನನ್ನ ಮಗನದೇ ಹೌದು; ದುಷ್ಟಮೃಗವು ಅವನನ್ನು ಕೊಂದು ತಿಂದಿರಬೇಕು; ಯೋಸೇಫನು ಸಂದೇಹವಿಲ್ಲದೆ ಸೀಳಿ ಹಾಕಲ್ಪಟ್ಟಿರಬೇಕು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:33
10 ತಿಳಿವುಗಳ ಹೋಲಿಕೆ  

ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟುಹೋದ; ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ.


ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು.


ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.


ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.


ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.


ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು