Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:36 - ಕನ್ನಡ ಸತ್ಯವೇದವು C.L. Bible (BSI)

36 ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:36
12 ತಿಳಿವುಗಳ ಹೋಲಿಕೆ  

ದಳಪತಿ ಜೋಸೆಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದನು. ಜೋಸೆಫನು ಅವರಿಗೆ ಸೇವೆಮಾಡಬೇಕಾಗಿತ್ತು.


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.


ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು.


ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ


ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು.


ಹಿಬ್ರಿಯನಾದ ಒಬ್ಬ ಯುವಕ ನಮ್ಮ ಸಂಗಡ ಅಲ್ಲಿದ್ದ. ಅವನು ದಳಪತಿಯವರ ಸೇವಕ. ನಾವು ನಮ್ಮ ಕನಸನ್ನು ಅವನಿಗೆ ತಿಳಿಸಿದೆವು. ಅವನು ಆ ಕನಸುಗಳಿಗೆ ಸರಿಯಾದ ಅರ್ಥವನ್ನು ಹೇಳಿದ.


ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I ದಾಸತ್ವಕೆ ಮಾರಲಾದ ಆ ಜೋಸೆಫನನು II


ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.


ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬಿಲೋನಿನ ವಿದ್ವಾಂಸರ ಸಂಹಾರಕ್ಕಾಗಿ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು