Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:25 - ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಆಕೆಯನ್ನು ಹೊರಕ್ಕೆ ತಂದಾಗ ಆಕೆ ತನ್ನ ಮಾವನಿಗೆ ಆ ಒತ್ತೆಯ ಸಾಮಾನುಗಳನ್ನು ಕಳುಹಿಸಿ - ಇವು ಯಾವನವೋ ಆ ಮನುಷ್ಯನಿಂದಲೇ ನಾನು ಬಸುರಾಗಿದ್ದೇನೆ; ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:25
7 ತಿಳಿವುಗಳ ಹೋಲಿಕೆ  

“ಏನು ಒತ್ತೆಯಿಡಬೇಕು?” ಎಂದು ಅವನು ಕೇಳಲು ಆಕೆ, “ನಿನ್ನ ಮುದ್ರೆ ಉಂಗುರ, ಅದರ ದಾರ ಮತ್ತು ನಿನ್ನ ಕೈಕೋಲು, ಈ ಮೂರನ್ನೂ ಇಡು,” ಎಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಭೋಗಿಸಿದನು. ಆಕೆ ಅವನಿಗೆ ಗರ್ಭವತಿ ಆದಳು.


ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು