Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:5 - ಕನ್ನಡ ಸತ್ಯವೇದವು C.L. Bible (BSI)

5 ಮತ್ತೊಮ್ಮೆ ಆಕೆ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಶೇಲಹ’ ಎಂದು ಹೆಸರಿಟ್ಟಳು. ಆಕೆ ಈ ಮಗುವನ್ನು ಹೆರುವಾಗ ಯೆಹೂದನು ಕೆಜೀಬ್ ಊರಿನಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಹ” ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವಳು ಮತ್ತೊಂದು ಸಾರಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ಅದಕ್ಕೆ ಶೇಲಹನೆಂದು ಹೆಸರಿಟ್ಟಳು; ಅವಳು ಆ ಮಗುವನ್ನು ಹೆರುವಾಗ ಯೆಹೂದನು ಕಜೀಬೂರಿನಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಆ ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು, ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ, ಯೆಹೂದನು ಕೆಜೀಬಿನಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:5
8 ತಿಳಿವುಗಳ ಹೋಲಿಕೆ  

ಯೆಹೂದ ಕುಲದಲ್ಲಿ ಉಳಿದ ಕುಟು೦ಬಗಳು ಇವು - ಶೆಲಹನಿ೦ದ ಶೇಲಾನ್ಯರು, ಪೆರೆಚನಿ೦ದ ಪೆರೆಚ್ಯರು, ಹಾಗು ಜೆರಹನಿ೦ದ ಜೆರಹಿಯರು.


ಶೇಲನು ಯೆಹೂದನ ಮಕ್ಕಳಲ್ಲಿ ಒಬ್ಬನು. ಅವನ ವಂಶೀಯರಲ್ಲಿ ಕೆಲವರ ಹೆಸರುಗಳು ಇಂತಿವೆ: ಲೇಕಾಹ್ಯರ ಪಟ್ಟಣದ ಸ್ಥಾಪಕ ಏರ್; ಮರೇಷತ್‍ನ ಸ್ಥಾಪಕ ಲದ್ದ; ಬೇತೆಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳು;


ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.


ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ‘ತಾಮಾರ್’ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.


ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು.


ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು