Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:9 - ಕನ್ನಡ ಸತ್ಯವೇದವು C.L. Bible (BSI)

9 ಆದರೆ ಓನಾನನು, ಹೀಗೆ ಆಗುವ ಸಂತಾನ ತನ್ನದಾಗುವುದಿಲ್ಲವೆಂದು ತಿಳಿದುಕೊಂಡನು. ಅಣ್ಣನಿಗೆ ಸಂತತಿ ಹುಟ್ಟಿಸಲು ಅವನು ಒಪ್ಪಲಿಲ್ಲ. ತನ್ನ ಅತ್ತಿಗೆಯಲ್ಲಿ ಸಂಭೋಗ ಮಾಡುವಾಗಲೆ ತನ್ನ ವೀರ್ಯವನ್ನು ಹಾಸಿಗೆಪಾಲು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಓನಾನನು ಈ ರೀತಿಯಾಗಿ ಆಗುವ ಸಂತಾನವು ತನ್ನದಾಗುವದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಲೊಲ್ಲದೆ ತನ್ನ ಅತ್ತಿಗೆಯಲ್ಲಿ ಸಂಗಮಮಾಡುವಾಗೆಲ್ಲಾ ತನ್ನ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:9
11 ತಿಳಿವುಗಳ ಹೋಲಿಕೆ  

“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಇದಲ್ಲದೆ, ಮಹ್ಲೋನನ ಪತ್ನಿಯಾದ ಮೋವಾಬ್ಯದ ರೂತಳನ್ನು ನನ್ನ ಹೆಂಡತಿಯನ್ನಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆ ಗತಿಸಿದ ಮಹ್ಲೋನನ ಹೆಸರಿನಲ್ಲೇ ಉಳಿಯುವುದು. ಮಾತ್ರವಲ್ಲ, ಅವನ ವಂಶವೃಕ್ಷವು ಅವನ ಬಂಧುಬಳಗದವರಲ್ಲೂ ಊರಿನಲ್ಲೂ ನೆಲೆಯಾಗಿರುವುದು. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು,” ಎಂದನು.


ಅವಳಲ್ಲಿ ಹುಟ್ಟುವ ಚೊಚ್ಚಲುಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು; ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಯೇಲರಲ್ಲಿ ಅಳಿದು ಹೋಗುವುದಿಲ್ಲ.


ಆಗ ನವೊಮಿ, “ಮಕ್ಕಳೇ, ನೀವು ಹಿಂತಿರುಗುವುದು ಒಳ್ಳೆಯದು. ನನ್ನ ಸಂಗಡ ಏಕೆ ಬರಬೇಕೆಂದಿರುವಿರಿ? ನೀವು ಪುನಃ ಮದುವೆಯಾಗುವುದಕ್ಕೆ ನನಗೆ ಬೇರೆ ಮಕ್ಕಳಿರುವರೇ?


ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.


“ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆ ಆಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು