Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:14 - ಕನ್ನಡ ಸತ್ಯವೇದವು C.L. Bible (BSI)

14 “ನೋಡಿ, ನನ್ನ ಯಜಮಾನರು ಮಾಡಿರುವ ಕೆಲಸ, ಒಬ್ಬ ಹಿಬ್ರಿಯನನ್ನು ಮನೆಗೆ ಸೇರಿಸಿಕೊಂಡು ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ಅತ್ಯಾಚಾರಕ್ಕಾಗಿ ನನ್ನ ಹತ್ತಿರಕ್ಕೆ ಬಂದ; ನಾನು ಗಟ್ಟಿಯಾಗಿ ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:14
21 ತಿಳಿವುಗಳ ಹೋಲಿಕೆ  

ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.


ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II


ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II


ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II


ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.


ಪತಿ ಬಂದಾಗ ಆಕೆ ಅವನಿಗೆ ಅದೇ ಮಾತನ್ನು ಹೇಳುತ್ತಾ, “ನೀವು ಮನೆಗೆ ಸೇರಿಸಿಕೊಂಡ ಆ ಹಿಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕಾಗಿ ನನ್ನ ಬಳಿಗೆ ಬಂದ. ನಾನು ಕೂಗಿಕೊಂಡೆ.


ಜೋಸೆಫನದು ಸೊಗಸಾದ ಮೈಕಟ್ಟು, ಸುಂದರವಾದ ರೂಪು. ಹೀಗಿರಲು ಅವನ ದಣಿಯ ಪತ್ನಿ ಅವನ ಮೇಲೆ ಕಣ್ಣುಹಾಕಿದಳು. "ನನ್ನೊಡನೆ ಹಾಸಿಗೆಗೆ ಬಾ,” ಎಂದು ಕರೆದಳು.


ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.


ಹಿಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗು ಸಹ ಮಕ್ಕಳಾದರು.


ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.


ಕುಖ್ಯಾತನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ಪಟ್ಟಣವೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು.


ಮನೆಯ ಸೇವಕರನ್ನು ಕರೆದಳು.


ನಾನು ಕೂಗುವುದನ್ನು ಕೇಳಿ ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ಅವರಿಗೆ ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು