Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:4 - ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:4
23 ತಿಳಿವುಗಳ ಹೋಲಿಕೆ  

ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.


ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,


ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರ ನಡೆಸುವನು, ಮನೆಮಕ್ಕಳ ಬಾಧ್ಯತೆಯಲ್ಲೂ ಪಾಲುಗಾರನಾಗುವನು.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.


“ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.


ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.


ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.


ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.


ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.


ಅದಕ್ಕೆ ಆ ಮೇಸ್ತ್ರಿ, “ಇವಳು ಮೋವಾಬ್ಯಳು, ನವೊಮಿಯ ಸಂಗಡ ಮೋವಾಬ್ ನಾಡಿನಿಂದ ಹಿಂದಿರುಗಿ ಬಂದವಳು.


ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.


ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.


ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು