Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:6 - ಕನ್ನಡ ಸತ್ಯವೇದವು C.L. Bible (BSI)

6 ಪೋಟೀಫರನು ಹೀಗೆ ತನ್ನದನ್ನೆಲ್ಲ ಜೋಸೆಫನ ವಶಕ್ಕೆ ಒಪ್ಪಿಸಿ, ‘ಅವನು ಇದ್ದಾನಲ್ಲಾ’ ಎಂದುಕೊಂಡು, ತಾನು ತಿನ್ನುತ್ತಿದ್ದ ಆಹಾರ ಒಂದನ್ನು ಬಿಟ್ಟು, ಬೇರೆ ಏನನ್ನೂ ಕುರಿತು ಚಿಂತಿಸದೆ ಇದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು; ಇವನು ತನ್ನ ಬಳಿಯಲ್ಲೇ ಇದ್ದದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವದನ್ನೂ ಚಿಂತಿಸಲಿಲ್ಲ. ಇದಲ್ಲದೆ ಯೋಸೇಫನು ರೂಪದಲ್ಲಿಯೂ ಮುಖಭಾವದಲ್ಲಿಯೂ ಸುಂದರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ, ತನ್ನ ಊಟದ ವಿಷಯದಲ್ಲಿ ಹೊರತು ಬೇರೆ ಯಾವುದರ ವಿಷಯದಲ್ಲಿಯೂ ಚಿಂತಿಸದೆ ಇದ್ದನು. ಯೋಸೇಫನು ಸುರೂಪಿಯೂ ಸುಂದರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:6
12 ತಿಳಿವುಗಳ ಹೋಲಿಕೆ  

ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು.


ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.


ಲೇಯಾ ಹೊಳಪಿನ ಕಣ್ಣಿನವಳು. ರಾಖೇಲಳಾದರೋ ರೂಪವತಿ, ಲಾವಣ್ಯವತಿ.


ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.


ಸುರಸುಂದರನಾದ ಮೋಶೆ ಜನಿಸಿದ್ದು ಈ ಸಂದರ್ಭದಲ್ಲೇ. ಅವನು ಮೂರು ತಿಂಗಳವರೆಗೆ ಮನೆಯಲ್ಲೇ ಬೆಳೆದನು.


ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.


ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ.


ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.


ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.


ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು