Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:15 - ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:15
15 ತಿಳಿವುಗಳ ಹೋಲಿಕೆ  

“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಕಾಯಿನನನ್ನು ಕೊಂದವನಿಗೆ ಆಗುವುದಾದರೆ ಪ್ರತೀಕಾರ ಏಳ್ಮಡಿ ಲೆಮೆಕನನ್ನು ಕೊಂದವನಿಗೆ ಆಗುವುದು ಪ್ರತೀಕಾರ ಎಪ್ಪತ್ತೇಳ್ಮಡಿ.


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,


ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಖಡ್ಗ ಎತ್ತಿದವರೆಲ್ಲರೂ ಖಡ್ಗದಿಂದಲೇ ಹತರಾಗುವರು.


ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು