Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:16 - ಕನ್ನಡ ಸತ್ಯವೇದವು C.L. Bible (BSI)

16 ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು" ಎಂಬ ನಾಡಿನಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಾಯಿನನು ಯೆಹೋವನ ಸನ್ನಿಧಾನದಿಂದ ಹೊರಟು ನೋದು ಎಂಬ ದೇಶದಲ್ಲಿ ವಾಸಿಸಿದನು; ಅದು ಏದೆನ್ ಸೀಮೆಗೆ ಮೂಡಲಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:16
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆಹೋಯಿತು.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II


ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II


ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು.


ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.


ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು