Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:26 - ಕನ್ನಡ ಸತ್ಯವೇದವು C.L. Bible (BSI)

26 ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:26
17 ತಿಳಿವುಗಳ ಹೋಲಿಕೆ  

ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಕಯಿನನ್‍ ಎನೋಷನಿಗೆ, ಎನೋಷ ಸೇತನಿಗೆ, ಸೇತ್ ಆದಾಮನಿಗೆ ಹುಟ್ಟಿದರು. ಆದಾಮನು ದೇವರ ಮಗನು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


“ಪ್ರಭುವಿನ ನಾಮಸ್ಮರಣೆಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ,” ಎಂದು ಲಿಖಿತವಾಗಿದೆ.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು