Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:15 - ಕನ್ನಡ ಸತ್ಯವೇದವು C.L. Bible (BSI)

15 ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:15
19 ತಿಳಿವುಗಳ ಹೋಲಿಕೆ  

ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.


“ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”


ಹಿಬ್ರಿಯನಾದ ಒಬ್ಬ ಯುವಕ ನಮ್ಮ ಸಂಗಡ ಅಲ್ಲಿದ್ದ. ಅವನು ದಳಪತಿಯವರ ಸೇವಕ. ನಾವು ನಮ್ಮ ಕನಸನ್ನು ಅವನಿಗೆ ತಿಳಿಸಿದೆವು. ಅವನು ಆ ಕನಸುಗಳಿಗೆ ಸರಿಯಾದ ಅರ್ಥವನ್ನು ಹೇಳಿದ.


ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.


ಜೋಸೆಫನು ಹೇಳಿದ ಅರ್ಥ ಶುಭಕರ ಆದುದೆಂದು ತಿಳಿದ ಆ ಮುಖ್ಯ ಅಡಿಗೆಭಟ್ಟ ಅವನಿಗೆ, “ನಾನು ಕಂಡ ಕನಸನ್ನು ಹೇಳುತ್ತೇನೆ, ಕೇಳು: ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲೆ ಇದ್ದವು.


ಅವನ ಕಾಲು ನೊಂದವು ಸಂಕೋಲೆಗಳಿಂದ I ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ II


ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು