Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:19 - ಕನ್ನಡ ಸತ್ಯವೇದವು C.L. Bible (BSI)

19 ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ಎತ್ತಿಸುವನು; ನಿನ್ನನ್ನು ಮರಕ್ಕೆ ತೂಗಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:19
17 ತಿಳಿವುಗಳ ಹೋಲಿಕೆ  

ಆದರೆ ಮುಖ್ಯ ಅಡಿಗೆಭಟ್ಟನನ್ನು ನೇಣು ಹಾಕಿಸಿದ. ಹೀಗೆ ಜೋಸೆಫನು ಹೇಳಿದ ಅರ್ಥ ಕಾರ್ಯಗತವಾಯಿತು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


“ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.


ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಅದು ಮಾತ್ರವಲ್ಲ, ಅವನು ಹೇಳಿದ ಪ್ರಕಾರವೇ ಆಯಿತು. ನನಗೆ ನೌಕರಿ ಮತ್ತೆ ದೊರಕಿತು. ಆ ಮುಖ್ಯ ಅಡಿಗೆಭಟ್ಟನನ್ನೋ ನೇಣುಹಾಕಲಾಯಿತು,’ ಎಂದು ಸನ್ನಿಧಿಯಲ್ಲಿ ಅರಿಕೆಮಾಡಿದ.


ಮೇಲಣ ಪುಟ್ಟಿಯಲ್ಲಿ ಫರೋಹನಿಗಾಗಿಯೆ ವಿಧವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯಿಂದಲೆ ತಿನ್ನುತ್ತಿದ್ದವು,” ಎಂದು ಹೇಳಿದ.


ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.


ಅದಕ್ಕೆ ಜೋಸೆಫನು, “ನಿನ್ನ ಕನಸಿನ ಅರ್ಥ ಇದು: ಆ ಮೂರು ಪುಟ್ಟಿಗಳೇ ಮೂರು ದಿನಗಳು.


ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು