Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:1 - ಕನ್ನಡ ಸತ್ಯವೇದವು C.L. Bible (BSI)

1 ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎರಡು ವರುಷಗಳಾದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸು ಏನಂದರೆ - ಅವನು ನೈಲ್‍ನದೀತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:1
21 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು.


ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,


ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು.


ಹೀಗೆ ಅವನು ತನ್ನ ಆಸ್ತಿಪಾಸ್ತಿಯೊಂದಿಗೆ ಓಡಿಹೋಗಿ ಯೂಫ್ರೆಟಿಸ್ ಮಹಾನದಿಯನ್ನು ದಾಟಿ ಗಿಲ್ಯಾದ್‍ ಎಂಬ ಗುಡ್ಡಗಾಡಿನ ದಾರಿಯನ್ನು ಹಿಡಿದನು.


ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು.


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.


ಆಗ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಆ ನದಿಯೊಳಗಿಂದ ಬಂದು ಜೊಂಡು ಹುಲ್ಲಿನಲ್ಲಿ ಮೇಯುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು