Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:14 - ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕೇಳಿದ ಫರೋಹನು ಜೋಸೆಫನನ್ನು ಕರೆತರುವಂತೆ ಆಳುಗಳನ್ನು ಕಳಿಸಿದ. ಅವರು ಬಂದು ಅವನನ್ನು ಸೆರೆಯಿಂದ ತ್ವರೆಯಾಗಿ ಬಿಡುಗಡೆ ಮಾಡಿದರು. ಜೋಸೆಫನು ಕ್ಷೌರಮಾಡಿಕೊಂಡು, ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಯಲ್ಲಿ ಹಾಜರಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಫರೋಹನು ಇದನ್ನು ಕೇಳಿ ಯೋಸೇಫನನ್ನು ಕರೇ ಕಳುಹಿಸಿದನು. ಯೋಸೇಫನು ಬೇಗನೆ ಸೆರೆಮನೆಯಿಂದ ಬಿಡಿಸಲ್ಪಟ್ಟವನಾಗಿ ಕ್ಷೌರಮಾಡಿಸಿಕೊಂಡು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಫರೋಹನ ಸನ್ನಿಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:14
13 ತಿಳಿವುಗಳ ಹೋಲಿಕೆ  

ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಸನ್ನಿಧಿಗೆ ಬೇಗಬೇಗನೆ ಕರೆದುಕೊಂಡು ಬಂದನು. “ರಾಜರೇ, ಆ ಕನಸಿನ ಉದ್ದೇಶವನ್ನು ನಿಮಗೆ ತಿಳಿಸಬಲ್ಲ ಒಬ್ಬನು ನನಗೆ ಸಿಕ್ಕಿದ್ದಾನೆ. ಅವನು ಜುದೇಯದಿಂದ ಸೆರೆಯಾಳಾಗಿ ತಂದವರಲ್ಲಿ ಒಬ್ಬನಾಗಿದ್ದಾನೆ,” ಎಂದು ಅರಿಕೆಮಾಡಿದನು.


ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ, ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕೂಡಲೆ ಕರೆಯಿಸಿ, “ನಾನು ನಿಮ್ಮ ದೇವರಾದ ಸರ್ವೇಶ್ವರನಿಗೂ ನಿಮಗೂ ದ್ರೋಹಮಾಡಿದ್ದೇನೆ.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.


ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು