Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:30 - ಕನ್ನಡ ಸತ್ಯವೇದವು C.L. Bible (BSI)

30 ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವುವು. ಆಗ ಈಜಿಪ್ಟ್ ದೇಶದ ಅವರು ಮೊದಲಿದ್ದ ಆ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಏಳು ಸುಭಿಕ್ಷ ವರುಷಗಳೂ ಅವುಗಳ ತರುವಾಯ ಏಳು ದುರ್ಭಿಕ್ಷವರುಷಗಳೂ ಬರುವವು. ಆಗ ಐಗುಪ್ತದೇಶದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:30
15 ತಿಳಿವುಗಳ ಹೋಲಿಕೆ  

ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು.


ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.


ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II


ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ಅವರು ಕುಡಿದು ಬಡತನ ಮರೆಯಲಿ, ತಮ್ಮ ಯಾತನೆಯನ್ನು ನೆನೆಯದಿರಲಿ.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.


ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.


ಜೇಷ್ಠಮಗ ಹುಟ್ಟಿದಾಗ ಜೋಸೆಫನು, “ನಾನು ನನ್ನ ಕಷ್ಟದುಃಖವನ್ನೂ ತಂದೆಯ ಮನೆಯವರನ್ನೂ ಮರೆಯುವಂತೆ ದೇವರು ಮಾಡಿದ್ದಾರಲ್ಲಾ!” ಎಂದುಕೊಂಡು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.


ಒಳ್ಳೆಯ ಹಸುಗಳ ಹಿಂದೆ ಬಂದ ಒಣಕಲಾಗಿದ್ದ ಆ ಏಳು ಬಡಹಸುಗಳು ಮತ್ತು ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳು ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.


ತಿಂದರೂ ತಿಂದಂತೆಯೇ ತೋರಲಿಲ್ಲ. ಮೊದಲಿದ್ದಂತೆಯೇ ಬಡಕಲಾಗಿದ್ದವು. ಅಷ್ಟರ ಒಳಗೆ ನನಗೆ ಎಚ್ಚರವಾಯಿತು.


ಮುಂದೆ ಬರಲಿರುವ ಕ್ಷಾಮವು ಅತ್ಯಂತ ಘೋರಾವಾಗಿರುವುದು; ಮೊದಲಿದ್ದ ಸಮೃದ್ಧಿಯ ಗುರುತೇ ಇಲ್ಲದೆ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು