Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:40 - ಕನ್ನಡ ಸತ್ಯವೇದವು C.L. Bible (BSI)

40 ನೀನೇ ಅರಮನೆಯಲ್ಲಿ ಮುಖ್ಯಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರು ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:40
16 ತಿಳಿವುಗಳ ಹೋಲಿಕೆ  

ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.


ನನ್ನ ಹೃದಯ ಅವಕ್ಕೆ ಮಾರುಹೋಗಿದ್ದರೆ ಬಾಯ್ಮೇಲೆ ಕೈಯಿಟ್ಟು ಅವನ್ನು ಆರಾಧಿಸಿದ್ದರೆ,


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.


ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು.


ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.


ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು