Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:43 - ಕನ್ನಡ ಸತ್ಯವೇದವು C.L. Bible (BSI)

43 ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:43
16 ತಿಳಿವುಗಳ ಹೋಲಿಕೆ  

ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ಅದಕ್ಕೆ ಆ ದೇಶಾಧಿಪತಿ, “ನೀವು ಸತ್ಯವಂತರೋ ಇಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮಲ್ಲಿ ಒಬ್ಬನನ್ನು ನನ್ನ ಬಳಿಯಲ್ಲೆ ಬಿಟ್ಟುಹೋಗಿ; ನಿಮ್ಮ ಕುಟುಂಬದವರ ಕ್ಷಾಮನಿವಾರಣೆಗೆ ಬೇಕಾದುದನ್ನು ತೆಗೆದುಕೊಂಡು ಹೋಗಬಹುದು.


“ಆ ದೇಶಾಧಿಪತಿ ನಮ್ಮೊಡನೆ ಗಡುಸಾಗಿ ಮಾತಾಡಿದ; ನಮ್ಮನ್ನು ಗೂಢಚಾರರೆಂದು ಕರೆದ.


ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.


ಅಷ್ಟು ಮಾತ್ರವಲ್ಲ, ಫರೋಹನು ಅವನಿಗೆ, “ಫರೋಹನಾದ ನಾನು ಹೇಳುತ್ತಿದ್ದೇನೆ: ನಿನ್ನ ಅಪ್ಪಣೆಯಿಲ್ಲದೆ ಇಡೀ ಈಜಿಪ್ಟ್ ದೇಶದಲ್ಲಿ ಯಾರೂ ಏನನ್ನೂ ಮಾಡಕೂಡದು,” ಎಂದು ಹೇಳಿದನು.


ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.


ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.


ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.


ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.


ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ.


ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು