ಆದಿಕಾಂಡ 41:8 - ಕನ್ನಡ ಸತ್ಯವೇದವು C.L. Bible (BSI)8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!