Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:1 - ಕನ್ನಡ ಸತ್ಯವೇದವು C.L. Bible (BSI)

1 ಈಜಿಪ್ಟಿನಲ್ಲಿ ದವಸಧಾನ್ಯ ದೊರಕುತ್ತದೆ ಎಂಬ ಸಮಾಚಾರ ಯಕೋಬನಿಗೆ ಮುಟ್ಟಿತು. ಅವನು ತನ್ನ ಮಕ್ಕಳಿಗೆ, “ನೀವು ಮುಖಮುಖ ನೋಡಿಕೊಂಡು ಸುಮ್ಮನಿರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐಗುಪ್ತದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ಕೇಳಿ ತನ್ನ ಮಕ್ಕಳಿಗೆ - ನೀವು ಒಬ್ಬರನ್ನೊಬ್ಬರು ನೋಡುತ್ತಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ಕಾನಾನಿನಲ್ಲಿದ್ದ ಯಾಕೋಬನಿಗೆ ತಿಳಿಯಿತು. ಆದ್ದರಿಂದ ಯಾಕೋಬನು ತನ್ನ ಗಂಡುಮಕ್ಕಳಿಗೆ, “ನಾವು ಇಲ್ಲಿ ಏನೂ ಮಾಡದೆ ಕುಳಿತುಕೊಂಡಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ಯಾಕೋಬನು ತಿಳಿದಾಗ, ಅವನು ತನ್ನ ಪುತ್ರರಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡು ಸುಮ್ಮನಿರುವುದೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:1
13 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಲ್ಲಿ ಧಾನ್ಯ ಇರುವುದೆಂದು ಅರಿತು ಯಕೋಬನು, ಮೊದಲ ಬಾರಿಗೆ ತನ್ನ ಪುತ್ರರನ್ನು ಅಲ್ಲಿಗೆ ಕಳುಹಿಸಿದನು.


ಸರ್ವೇಶ್ವರ ಯೆಹೋಶುವನಿಗೆ ಹೀಗೆ ಎಂದರು : “ನೀನು ಅಧೋಮುಖವಾಗಿ ಬಿದ್ದು ಇರುವುದೇಕೆ, ಏಳು.


ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು.


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಕಟ್ಟಪ್ಪಣೆ ಆದುದರಿಂದ ಇಸ್ರಯೇಲ್ ಮೇಸ್ತ್ರಿಗಳು ತಾವು ಎಂಥ ಬಿಕ್ಕಟ್ಟಿಗೆ ಸಿಕ್ಕಿಕೊಂಡೆವೆಂದು ಗ್ರಹಿಸಿಕೊಂಡರು.


ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.


ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು. ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು.


ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು