Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:11 - ಕನ್ನಡ ಸತ್ಯವೇದವು C.L. Bible (BSI)

11 ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:11
8 ತಿಳಿವುಗಳ ಹೋಲಿಕೆ  

ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ.


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ಜೋಸೆಫನು ಅವರಿಗೆ, “ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದಿದ್ದೀರಿ,” ಎಂದನು.


ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇರಿಸುತ್ತೇನೆ. ಹೀಗೆ ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಇಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ,” ಎಂದು ಹೇಳಿ,


ನಾವು ಅವನಿಗೆ, ‘ನಾವು ಸತ್ಯವಂತರೇ ಹೊರತು ಗೂಢಚಾರರೇನು ಅಲ್ಲ,


ಆಗ ಅವರು, ”ಆ ಮನುಷ್ಯ ನಿಮ್ಮ ವಿಷಯದಲ್ಲೂ ನಮ್ಮ ಮನೆಯವರ ವಿಷಯದಲ್ಲೂ ಸೂಕ್ಷ್ಮವಾಗಿ ವಿಚಾರಿಸಿದ; ನಿಮ್ಮ ತಂದೆ ಇನ್ನು ಜೀವದಿಂದ ಇದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದೆಲ್ಲ ಅವನೇ ಕೇಳಿದ. ಆ ಪ್ರಶ್ನೆಗಳಿಗೆ ನಾವು ತಕ್ಕ ಉತ್ತರ ಕೊಡಬೇಕಾಯಿತು. ಅಲ್ಲದೆ, ಅವನು ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ', ಎಂದು ಕೇಳುತ್ತಾನೆಂದು ತಿಳಿಯಲು ನಮಗೆ ಹೇಗೆ ಸಾಧ್ಯವಿತ್ತು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು